ಕಲಬುರಗಿ| ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ, ಸಿಬ್ಬಂದಿ 

Date:

Share post:

ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ.

ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಮಲ್ಲಿಕಾರ್ಜುನ್ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗೀತಾ ಎಂಬಾತರೆ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿಗಳಾಗಿದ್ದಾರೆ.

ಶ್ರೀ ಬೀರಲಿಂಗೇಶ್ವರ ಹೊಸ ಕೋಳಿ ಸಾಕಾಣಿಕೆದಾರ ಮಾಡೋದಕ್ಕೆ ಹಾಗೂ ಮಾರಾಟಗಾರರ ಸಹಕಾರಿ ಸಂಘದ ನೊಂದಣಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೀರಪ್ಪ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾ ಪೊಲೀಸರು ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ನಿಬಂಧಕ ಹಾಗೂ ಕಂಪ್ಯೂಟರ್ ಆಪರೇಟರ್ ರನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆಯಲ್ಲಿ ಸಿಬ್ಬಂದಿ ಮಲ್ಲಿನಾಥ ಸೇರಿದಂತೆ ಮತ್ತಿತರರು ಇದ್ದರು.

 

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...