ಕಲಬುರಗಿ| ಅ.11ರಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಡಾ. ರೆಹಮಾನ್ ಪಟೇಲ್ ಸಂಪಾದಕತ್ವದ ದೃಶ್ಯಕಲಾ ಸಿರಿ ಕೃತಿ ಲೋಕಾರ್ಪಣೆ

Date:

Share post:

ಕಲಬುರಗಿ: ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಕಲಾವಿದ ಡಾ. ರೆಹಮಾನ್ ಪಟೇಲ್ ಅವರ ಸಂಪಾದಕತ್ವದ ಈ ಭಾಗದ ಚಿತ್ರಕಲಾವಿದರ ಪರಿಚಯಾತ್ಮಕದ ದೃಶ್ಯಕಲಾ ಸಿರಿ ಕೃತಿ ಜನಾರ್ಪಣೆ ಸಮಾರಂಭವನ್ನು ಅಕ್ಟೋಬರ್ 11 ರ ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏರ್ಪಡಿಸಲಾಗಿದೆ ಎಂದು ಕಸಾಪ ಜಿಲ್ಲಾ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ ತಿಳಿಸಿದ್ದಾರೆ.

ಬೆರಳು ತುದಿಯಲ್ಲಿ ಅನಾವರಣಗೊಳ್ಳುವ ದೃಶ್ಯಕಲಾ ಸಾಹಿತ್ಯ ಇಂದು ತುಂಬಾ ವಿಶಿಷ್ಟವಾಗಿದೆ. ಸಾಹಿತ್ಯದ ಪ್ರಕಾರಗಳಲ್ಲಿ ಇದು ಕೂಡ ಒಂದಾಗಿದೆ. ಒಂದು ಚಿತ್ರ ಸಾವಿರ ಪದಗಳಿಗೆ ಸಮಾನವಾಗಿರುತ್ತದೆ. ಕವಿ ತನಗೆ ಕಂಡಿದ್ದನ್ನು ಕಾವ್ಯವಾಗಿಸಬಲ್ಲ. ಆದರೆ ಚಿತ್ರಕಲಾವಿದನು ದೃಶ್ಯವನ್ನೇ ಅನಾವರಣಗೊಳಿಸಬಲ್ಲ. ಇಂಥ ಪ್ರಬುದ್ಧತೆ ಕಲಾವಿದರಿಗೆ ಇರುತ್ತದೆ. ಹೀಗಾಗಿ ಈ ಭಾಗದ ಚಿತ್ರಕಲಾ ಜಗತ್ತಿನ ದಿಗ್ಗಜರನ್ನು ಇಂದಿನ ಹೊಸ ಪೀಳಿಗೆಗೆ ಪರಿಚಯಿಸುವ ಕೃತಿ ಇದಾಗಿದೆ.

ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಆರ್.ಆರ್. ಬಿರಾದಾರ ಕೃತಿ ಜನಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ನಾಡೋಜ ಡಾ. ಜೆ.ಎಸ್. ಖಂಡೇರಾವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ವಿಶ್ವಖ್ಯಾತಿಯ ಚಿತ್ರಕಲಾವಿದ ಮಹ್ಮದ್ ಅಯಾಜೋದ್ದೀನ್ ಪಟೇಲ ಕೃತಿ ಪರಿಚಯಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕೃತಿ ಜನಾರ್ಪಣೆ ಸಂದರ್ಭದಲ್ಲಿ ಪರಿಚಯಿಸಲ್ಪಟ್ಟ ಚಿತ್ರಕಲಾವಿದರು ಹಾಗೂ ಕಲಾವಿದರನ್ನು ಪರಿಚಯಿಸಿದ ಕಲಾವಿದರ ಚಿತ್ರಕಲಾ ಪ್ರದರ್ಶನವೂ ಸಹ ಏರ್ಪಡಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...