ಕಲಬುರಗಿ| ವಿವಿಧ ಕೋರ್ಸುಗಳಿಗೆ ದಂಡಶುಲ್ಕವಿಲ್ಲದೇ ಪ್ರವೇಶ ಪಡೆಯಲು ಅ.15 ಕೊನೆಯ ದಿನ

Date:

Share post:

ಕಲಬುರಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ (ಜುಲೈ ಆವೃತ್ತಿಯ) ಈ ಕೆಳಕಂಡ ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು 2025ರ ಅಕ್ಟೋಬರ್ 15 ರಂದು ಕೊನೆಯ ದಿನವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಪ್ರಥಮ ಬಿ.ಎ./ಬಿ.ಕಾಂ., ಬಿ.ಎಲ್‍ಎಲ್‍ಐಬಿ.ಐ.ಎಸ್ಸಿ, ಬಿ.ಎಸ್ಸಿ, ಬಿ.ಬಿ.ಎ., ಬಿ.ಸಿ.ಎ. ಹಾಗೂ ಪ್ರಥಮ ಎಂ.ಎ.: ಕನ್ನಡ, ಇಂಗ್ಲೀಷ, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಎಂ.ಕಾಂ., ಎಂ.ಬಿ.ಎ., ಎಮ್.ಎಲ್‍ಐಬಿ.ಐ.ಎಸ್ಸಿ, ಎಂ.ಎಸ್.ಸಿ., ಎಂ.ಎಸ್.ಡಬ್ಲ್ಯೂ, ಬಿ.ಎಸ್.ಡಬ್ಲ್ಯೂ., ಎಂ.ಸಿ.ಎ. ಹಾಗೂ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

 

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 10ರಷ್ಟು ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಕಲಬುರಗಿ ಕಚೇರಿಯನ್ನು ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಇವರ ಮೊಬೈಲ್ ಸಂಖ್ಯೆ 9916783555 ಹಾಗೂ ವಿಶ್ವವಿದ್ಯಾಲಯದ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...