ಕಲಬುರಗಿ| ವಿವಿಧ ಕೋರ್ಸುಗಳಿಗೆ ದಂಡಶುಲ್ಕವಿಲ್ಲದೇ ಪ್ರವೇಶ ಪಡೆಯಲು ಅ.15 ಕೊನೆಯ ದಿನ

Date:

Share post:

ಕಲಬುರಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ (ಜುಲೈ ಆವೃತ್ತಿಯ) ಈ ಕೆಳಕಂಡ ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು 2025ರ ಅಕ್ಟೋಬರ್ 15 ರಂದು ಕೊನೆಯ ದಿನವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಪ್ರಥಮ ಬಿ.ಎ./ಬಿ.ಕಾಂ., ಬಿ.ಎಲ್‍ಎಲ್‍ಐಬಿ.ಐ.ಎಸ್ಸಿ, ಬಿ.ಎಸ್ಸಿ, ಬಿ.ಬಿ.ಎ., ಬಿ.ಸಿ.ಎ. ಹಾಗೂ ಪ್ರಥಮ ಎಂ.ಎ.: ಕನ್ನಡ, ಇಂಗ್ಲೀಷ, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಎಂ.ಕಾಂ., ಎಂ.ಬಿ.ಎ., ಎಮ್.ಎಲ್‍ಐಬಿ.ಐ.ಎಸ್ಸಿ, ಎಂ.ಎಸ್.ಸಿ., ಎಂ.ಎಸ್.ಡಬ್ಲ್ಯೂ, ಬಿ.ಎಸ್.ಡಬ್ಲ್ಯೂ., ಎಂ.ಸಿ.ಎ. ಹಾಗೂ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

 

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 10ರಷ್ಟು ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಕಲಬುರಗಿ ಕಚೇರಿಯನ್ನು ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಇವರ ಮೊಬೈಲ್ ಸಂಖ್ಯೆ 9916783555 ಹಾಗೂ ವಿಶ್ವವಿದ್ಯಾಲಯದ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳುಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು...

ಕಲಬುರಗಿ| ನಮ್ಮ ಕರ್ನಾಟಕ ಸೇನೆಯ ಕಚೇರಿ ಉದ್ಘಾಟನೆ

ಕಲಬುರಗಿ: ನಗರದ ಐವಾನ್-ಏ-ಶಾಹಿನಲ್ಲಿರುವ ವಿಜ್ಜು ವುಮೇನ್ಸ್ ಕಾಲೇಜು ಹತ್ತಿರ ಜಾಜಿ ಕಾಂಪ್ಲೇಕ್ಸ್ನಲ್ಲಿ...

ಕಲಬುರಗಿ| ಗುಲಬರ್ಗಾ ವಿವಿಯಲ್ಲಿ ಶ್ರೀ ಕನಕದಾಸರ 538ನೇ ಜಯಂತ್ಯೋತ್ಸವ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಶ್ರೀ...

ಕಲಬುರಗಿ| ಅಸ್ಪೃಶ್ಯತೆ ನಿವಾರಣೆಗೆ ಬಾಬಾಸಾಹೇಬರ ವಿಚಾರ ಪ್ರಸಾರ ಅಗತ್ಯ: ಎಚ್.ಟಿ. ಪೋತೆ

ಕಲಬುರಗಿ: “ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಕನಕದಾಸರನ್ನು ಹೋರಗೆ ಇಟ್ಟ...