ಕಲಬುರಗಿ| “ಬಯಲೆಂಬೊ ಬಯಲು” ಕಾದಂಬರಿ ಸಮಾಜ ಮುಖಿ ನಿಲುವು: ಪ್ರೊ. ಎಚ್.ಟಿ. ಪೋತೆ 

Date:

Share post:

ಕಲಬುರಗಿ: “ಬಯಲೆಂಬೊ ಬಯಲು” ಕಾದಂಬರಿಯು ಕುಟುಂಬದಲ್ಲಿ ಹುಟ್ಟಿ ಸಮಾಜ ಮುಖಿಯಾಗಿ ನಿಲ್ಲುತ್ತದೆ ಎಂದು ಸಾಹಿತಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ.ಪೋತೆ ಹೇಳಿದರು.

ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ “ಬಯಲೆಂಬೊ ಬಯಲು” ಕೃತಿಯ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಬರೆಹ ದಮನಿತರಿಗೆ, ಶೋಷಿತರಿಗೆ, ವಿಶೇಷವಾಗಿ ಎಲ್ಲ ವರ್ಗದ ಮಹಿಳೆಯರಿಗೆ ಬದಲಾವಣೆಯ ಮಾರ್ಗವಾಗದ್ದಲ್ಲದೆ, ದಮನಿತರು ಅಕ್ಷರವಂತರಾದಾಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಅಕ್ಷರ ಅಥವಾ ಸಮಾನತೆ ಸಿಗುವಲ್ಲಿ ಸಂವಿಧಾನ ಪ್ರಧಾನ ಪಾತ್ರವಹಿಸುತ್ತದೆ. ಭಾರತದ ಎಲ್ಲರೂ ಭಾತೃತ್ವತೆಯಿಂದ ಬದುಕಬೇಕಾದರೆ ಅದಕ್ಕೆ ಸಂವಿಧಾನ ಆಧಾರವಾಗಿ ನಿಲ್ಲುತ್ತದೆ ಎಂದು ಹೇಳಿದರು.

ಹಿರಿಯ ಸಾಹಿತಿಗಳಾದ ಡಾ.ಶ್ರೀಶೈಲ ನಾಗರಾಳ ಅವರು ಪುಸ್ತಕ ಕುರಿತು ಮಾತನಾಡಿ, ಮೇಲ್ಜಾತಿ ಮತ್ತು ಕೆಳಜಾತಿಗಳ ನಡುವಿನ ಸಂಘರ್ಷ ಹಾಗೂ ಸಮಾಜದ ಅವ್ಯವಸ್ಥೆಯನ್ನು ಸವಿಸ್ತಾರವಾಗಿ ವಿಮರ್ಶಿಸುವ ಕಾದಂಬರಿಯಾಗಿದೆ ಎಂದರು. ಇದು ಕನ್ನಡ ಸಾಹಿತ್ಯದ ಮೊದಲ ಬಯೋಪಿಕ ಕಾದಂಬರಿ ಎಂದು ಹೇಳಿದರು.

ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಶಾರದಾ ಜಾಧವ, ಐಕ್ಯೂಎಸಿ ಸಂಯೋಜಕ ಡಾ. ರಾಜಶೇಖರ ಮಡಿವಾಳ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಶ್ರೀಮಂತ ಹೋಳ್ಳರ್, ಪ್ರಾಧ್ಯಾಪಕ ಡಾ. ಸುರೇಂದ್ರ ಕುಮಾರ ಕೆರಮಗಿ, ಸಹ ಪ್ರಾಧ್ಯಾಪಕ ಡಾ. ನಾಗಪ್ಪ ಗೋಗಿ ಉಪಸ್ಥಿತಿ ಇದ್ದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋದಕ ಮತ್ತು ಬೋದಕೇತರ ಸಿಬ್ಬಂದಿ ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಪನ್ಯಾಸಕಿ ಡಾ. ಶೈಲಜಾ ಎನ್. ಬಾಗೇವಾಡಿ ಗಣ್ಯರನ್ನು ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಶಾಮಲಾ ಸ್ವಾಮಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ನಾಮದೇವ ರಾಠೋಡ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಶ್ರೀದೇವಿ ರಾಠೋಡ ನಿರೂಪಣೆ ಮಾಡಿದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...