ಕಲಬುರಗಿ: ಸ್ಪೀಕರ್ ಯು.ಟಿ. ಖಾದರ್‌, ಹಜರತ ಖಾಜಾ ಬಂದನವಾಜ್ (ರ.ಅ) ದರ್ಗಾಕ್ಕೆ ಭೇಟಿ

Date:

Share post:

ಕಲಬುರಗಿ : ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಶುಕ್ರವಾರ ಹಜರತ್ ಖಾಜಾ ಬಂದನವಾಜ್ (ರ.ಅ) ದರ್ಗಾ ದರ್ಶನ ಪಡೆದು ಸಜ್ಜಾದಾ ನಶೀನ ಅವರೊಂದಿಗೆ ಜುಮಾ ನಮಾಜ ಮಾಡಿದರು. ನಮಾಜಿನ ಬಳಿಕ ಅವರು ಗುಂಬದ್ ಮುಬಾರಕ್ಗೆ ಭೇಟಿ ನೀಡಿ, ಪುಷ್ಪಾರ್ಚನೆ ಸಲ್ಲಿಸಿದರು ಹಾಗೂ ಫಾತಿಹಾ ಖುವಾನಿ ನೆರವೇರಿಸಿತು.

 

ನಂತರ, ಸಜ್ಜಾದಾ ನಶೀನ್ ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್-ಹುಸೈನೀ ಅವರು ಯು.ಟಿ. ಖಾದರ್ ಅವರಿಗೆ ಸನ್ಮಾನ ಮಾಡಿ, ಪವಿತ್ರ ತಬರುಕ್ಕಾತ್ (ಮಂಗಳ ವಸ್ತುಗಳು) ನೀಡಿದರು. ನಂತರ ದರ್ಗಾ ಶರೀಫ್‌ನ ಸಂಪೂರ್ಣ ಪವಿತ್ರ ದರ್ಶನ (ಜಿಯಾರತ್) ಮಾಡಿಸಿದರು.

 

“ಇಂದು ನನಗೆ ಹಜರತ್ ಖಾಜಾ ಬಂದನವಾಜ್ (ರ.ಅ) ದರ್ಗಾ ಶರೀಫ್‌ಗೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿದೆ. ಬಡಿ ದೇ಼ವಡಿಯಲ್ಲಿ ಸಜ್ಜಾದಾ ನಶೀನ್ ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್-ಹುಸೈನೀ ಮತ್ತು ಅವರ ತಮ್ಮ ಡಾ. ಸಯ್ಯದ್ ಮುಸ್ತಫಾ ಅಲ್-ಹುಸೈನೀ ಅವರನ್ನು ಭೇಟಿ ಮಾಡಿದೆ. ಇಲ್ಲಿ ಪಡೆದ ದುವೆಗಳೊಂದಿಗೆ ನಾನು ಹೊರಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜನಾಬ್ ಸಯ್ಯದ್ ಶಾಹ್ ತಕಿ ಉಲ್ಲಾ ಹುಸೈನೀ, ಜನಾಬ್ ಸಯ್ಯದ್ ಮುರ್ತಝಾ ಹುಸೈನೀ, ಜನಾಬ್ ಸಯ್ಯದ್ ಆಕಿಬ್ ಹುಸೈನೀ, ಜನಾಬ್ ಆದಿಲ್ ಸುಲೇಮಾನ್ ಸೇಠ್, ಜನಾಬ್ ಶಫೀಕ್ ಅಹ್ಮದ್ (ಶಬ್ಬು) ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕೂಡ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...