ಕಲಬುರಗಿ: ಸ್ಪೀಕರ್ ಯು.ಟಿ. ಖಾದರ್‌, ಹಜರತ ಖಾಜಾ ಬಂದನವಾಜ್ (ರ.ಅ) ದರ್ಗಾಕ್ಕೆ ಭೇಟಿ

Date:

Share post:

ಕಲಬುರಗಿ : ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಶುಕ್ರವಾರ ಹಜರತ್ ಖಾಜಾ ಬಂದನವಾಜ್ (ರ.ಅ) ದರ್ಗಾ ದರ್ಶನ ಪಡೆದು ಸಜ್ಜಾದಾ ನಶೀನ ಅವರೊಂದಿಗೆ ಜುಮಾ ನಮಾಜ ಮಾಡಿದರು. ನಮಾಜಿನ ಬಳಿಕ ಅವರು ಗುಂಬದ್ ಮುಬಾರಕ್ಗೆ ಭೇಟಿ ನೀಡಿ, ಪುಷ್ಪಾರ್ಚನೆ ಸಲ್ಲಿಸಿದರು ಹಾಗೂ ಫಾತಿಹಾ ಖುವಾನಿ ನೆರವೇರಿಸಿತು.

 

ನಂತರ, ಸಜ್ಜಾದಾ ನಶೀನ್ ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್-ಹುಸೈನೀ ಅವರು ಯು.ಟಿ. ಖಾದರ್ ಅವರಿಗೆ ಸನ್ಮಾನ ಮಾಡಿ, ಪವಿತ್ರ ತಬರುಕ್ಕಾತ್ (ಮಂಗಳ ವಸ್ತುಗಳು) ನೀಡಿದರು. ನಂತರ ದರ್ಗಾ ಶರೀಫ್‌ನ ಸಂಪೂರ್ಣ ಪವಿತ್ರ ದರ್ಶನ (ಜಿಯಾರತ್) ಮಾಡಿಸಿದರು.

 

“ಇಂದು ನನಗೆ ಹಜರತ್ ಖಾಜಾ ಬಂದನವಾಜ್ (ರ.ಅ) ದರ್ಗಾ ಶರೀಫ್‌ಗೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿದೆ. ಬಡಿ ದೇ಼ವಡಿಯಲ್ಲಿ ಸಜ್ಜಾದಾ ನಶೀನ್ ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್-ಹುಸೈನೀ ಮತ್ತು ಅವರ ತಮ್ಮ ಡಾ. ಸಯ್ಯದ್ ಮುಸ್ತಫಾ ಅಲ್-ಹುಸೈನೀ ಅವರನ್ನು ಭೇಟಿ ಮಾಡಿದೆ. ಇಲ್ಲಿ ಪಡೆದ ದುವೆಗಳೊಂದಿಗೆ ನಾನು ಹೊರಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜನಾಬ್ ಸಯ್ಯದ್ ಶಾಹ್ ತಕಿ ಉಲ್ಲಾ ಹುಸೈನೀ, ಜನಾಬ್ ಸಯ್ಯದ್ ಮುರ್ತಝಾ ಹುಸೈನೀ, ಜನಾಬ್ ಸಯ್ಯದ್ ಆಕಿಬ್ ಹುಸೈನೀ, ಜನಾಬ್ ಆದಿಲ್ ಸುಲೇಮಾನ್ ಸೇಠ್, ಜನಾಬ್ ಶಫೀಕ್ ಅಹ್ಮದ್ (ಶಬ್ಬು) ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕೂಡ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...