ಕಲಬುರಗಿ| ಕಬ್ಬಿನ ದರ ನಿಗದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ 

Date:

Share post:

ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು.

ನವೆಂಬರ್ 7 ರಂದು ಮಾನ್ಯ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಮಾನ್ಯ ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು.

ಆಗ ಉತ್ತರಿಸಿದ ಸಚಿವರು, ಸರಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು, ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ,...

ಕಲಬುರಗಿ| ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು; ಮೂವರು ಗಂಭೀರ

ಕಲಬುರಗಿ: ಜೀಪ್ ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ...

ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ| ಅಂಬೇಡ್ಕರ್ ರವರನ್ನು ನಿಜವಾಗಿಯೂ ಗೌರವಿಸಿದ್ದು ಬಿಜೆಪಿ, ಕಾಂಗ್ರೆಸ್ ಅಲ್ಲ: ಅಶೋಕ್ ಬಗಲಿ

ಕಲಬುರಗಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪ ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರ್...