ಕಲಬುರಗಿ| ಚಾಂದ್ ಬೀಬೀ ಮಹಿಳಾ ಕಾಲೇಜಿನಲ್ಲಿ “ಭಾರತೀಯ ಸಂವಿಧಾನ ದಿನ” ಆಚರಣೆ

Date:

Share post:

ಕಲಬುರಗಿ: ನಗರದ ಚಾಂದ್ ಬೀಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ” ಭಾರತೀಯ ಸಂವಿಧಾನ ದಿನ” ವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರುಕ್ಷಿಂದಾ ಹೀನಾ ಅಕ್ಬರಿ ಅವರು ಭಾರತರತ್ನ, ಸಂವಿಧಾನ ನಿರ್ಮಾತೃ ಡಾ. ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ.ಶರಬಯ್ಯ ಸ್ವಾಮಿ ಮಾತನಾಡಿ, “ಭಾರತೀಯ ಸಂವಿಧಾನ ದಿನ” ವನ್ನು ಪ್ರತಿವರ್ಷ ನವೆಂಬರ್ 26ರಂದು ಆಚರಿಸಲಾಗುತ್ತದೆ. ಈ ದಿನ 1949 ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥವಾಗಿದೆ. ನಮ್ಮ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿ, ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುತ್ತದೆ. ಸಂವಿಧಾನದ ಮುಖ್ಯ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಅಪಾರ ಕೊಡುಗೆಯನ್ನು ಗೌರವಿಸುವ ದಿನವೂ ಇದಾಗಿದೆ ಎಂದರು.

2015 ರಲ್ಲಿ ಭಾರತ ಸರ್ಕಾರವು ನವೆಂಬರ್ 26 ಅನ್ನು ಅಧಿಕೃತವಾಗಿ “ಸಂವಿಧಾನ ದಿನ” ವೆಂದು ಘೋಷಿಸಿತು.ನಾವೆಲ್ಲರೂ ಈ ದಿನ ಸಂವಿಧಾನದ ಮೌಲ್ಯಗಳನ್ನು ಅರಿತು, ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಜವಾಬ್ದಾರಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಸಂವಿಧಾನವು ನಮಗೆ ಪ್ರೇರೇಪಣೆ ನೀಡುತ್ತದೆ ಎಂದು ಹೇಳಿದರು.

 

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಮಲ್ಲಿಕಾರ್ಜುನ್ ಡೊನ್ನೂರ್ ಅವರು ಸಂವಿಧಾನದ ಪೀಠಿಕೆಯನ್ನು ಗಟ್ಟಿಯಾಗಿ ಓದಿ ವಿದ್ಯಾರ್ಥಿಗಳಿಗೂ ಓದಿಸಿದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಗೌರವಪೂರ್ಣವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕರಾದ ಡಾ. ಸಮೀನಾ ತಹಸೀನ್ ಮಾಡಿದರು. ಸ್ವಾಗತವನ್ನು ಉಪನ್ಯಾಸಕರಾದ ಡಾ. ಉಮಾ ಕಾಂತ ಗೌಡ ನೆರವೇರಿಸಿದರು. ಕಾಲೇಜಿನ ವಿದ್ಯಾರ್ಥಿನಿಯಾದ ಸುಮಾ ಅವರು ವಂದನಾರ್ಪಣೆಯನ್ನು ಸಲ್ಲಿಸಿದರು. ರಾಷ್ಟ್ರಗೀತೆ ಹಾಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...