ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿಗೆ ನಿಗದಿಪಡಿಸಿದ ಗರಿಷ್ಠ ಕ್ವಿಂಟಾಲ್ ಮಿತಿ ಬದಲಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಈ ಹಿಂದೆ ಸರ್ಕಾರದ ಆದೇಶ ದಿ.25-09-2025 ಮತ್ತು 29-09-2025ರಲ್ಲಿ ಹೆಸರು ಕಾಳು ಪ್ರತಿ ಎಕರೆಗೆ 3 ಕ್ವಿಂಟಾಲ್‌ನಂತೆ ಪ್ರತಿ ರೈತನಿಂದ ಗರಿಷ್ಠ 15 ಕ್ವಿಂಟಾಲ್, ಉದ್ದು ಕಾಳು ಪ್ರತಿ ಎಕರೆಗೆ 5 ಕ್ವಿಂಟಾಲ್‌ನಂತೆ ಗರಿಷ್ಠ 30 ಕ್ವಿಂಟಾಲ್, ಸೂರ್ಯಕಾಂತಿ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಹಾಗೂ ಸೋಯಾಬೀನ್ ಪ್ರತಿ ಎಕರೆಗೆ 5 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿಗೆ ಆದೇಶಿಸಲಾಗಿತು. ಇದೀಗ ಸರ್ಕಾರ ಆದೇಶ ಮಾರ್ಪಡಿಸಿದ್ದು, ಅದರಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೆಸರು- 8,768 ರೂ., ಉದ್ದಿನ ಕಾಳು-7,800 ರೂ., ಸೂರ್ಯಕಾಂತಿ-7,721 ರೂ. ಹಾಗೂ ಸೋಯಾಬೀನ್-5,328 ರೂ. ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲಾಗುತ್ತದೆ. ಮಾರ್ಪಡಿಸಿದ ಖರೀದಿ ಪ್ರಮಾಣದಂತೆ ರೈತರು ಹೆಸರು, ಉದ್ದು, ಹಾಗೂ ಸೂರ್ಯಕಾಂತಿ ಉತ್ಪನ್ನ ನೋಂದಣಿಯನ್ನು ಡಿಸೆಂಬರ್ 13 ರೊಳಗೆ ಮಾಡಿ ಡಿಸೆಂಬರ್ 23 ರೊಳಗೆ ಮಾರಾಟ ಮಾಡಬೇಕು. ಅದೇ ರೀತಿ ಸೋಯಾಬೀನ್ ಉತ್ಪನ್ನ ಬೆಳೆದ ರೈತರು ಡಿಸೆಂಬರ್ 17 ರೊಳಗೆ ನೋಂದಣಿ ಮಾಡಿಕೊಂಡು ಡಿಸೆಂಬರ್ 27 ರೊಳಗೆ ಸಮೀಪದ ಕೃಷಿ ಪತ್ತಿನ ಸಹಕಾರ ಸಂಘ ಮತು ಎಫ್.ಪಿ.ಓ. ಖರೀದಿ ಕೇಂದ್ರದಲ್ಲಿ ಮಾರಾಟ ಮಾಡುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ರೈತ ಬಾಂಧವರಲ್ಲಿ ಡಿ.ಸಿ. ಮನವಿ ಮಾಡಿದ್ದಾರೆ.

ಉದ್ದಿನ ಕಾಳು ಮತ್ತು ಸೋಯಾಬೀನ್ ಖರೀದಿಗೆ ಮೊ. 9449864446, ಹೆಸರು ಕಾಳು ಖರೀದಿಗೆ 9964474444 ಹಾಗೂ ಸೂರ್ಯಕಾಂತಿ ಖರೀದಿಗೆ 9591812142 ಸಂಖ್ಯೆಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...