ಕಲಬುರಗಿ| ಸೇಡಂ ತಾಲ್ಲೂಕು ಕಚೇರಿಗೆ ಹುಸಿ ಬಾಂಬ್ ಬೆದರಿಕೆ; ತಪಾಸಣೆ

Date:

Share post:

ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ತಾಲ್ಲೂಕು ಕಚೇರಿ ಪ್ರಜಾಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ಮಂಗಳವಾರ ನಡೆದಿದೆ.

ಅನಾಮಿಕ ಇಮೇಲ್ ಮೂಲಕ ತಹಶೀಲ್ದಾರ್ ಅವರ ಅಧಿಕೃತ ಇಮೇಲ್‌ಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶ್ರೀಯಾಂಕ್ ಧನಶ್ರೀ ಅವರು ತಕ್ಷಣವೇ ಸೇಡಂ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳದ ತಂಡದವರು ಹಾಗೂ ಶ್ವಾನದಳದ ಸಿಬ್ಬಂದಿ ಪ್ರಜಾಸೌಧಕ್ಕೆ ದೌಡಾಯಿಸಿ ಕಟ್ಟಡದ ಒಳಭಾಗ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಿದರು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಭಯಭೀತರಾದ ಕಚೇರಿ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದು, ಇಮೇಲ್ ಮೂಲ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ.

ಈ ಸಂದರ್ಭದಲ್ಲಿ ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ತಹಸಿಲ್ದಾರ್ ಶ್ರೀಯಾಂಕ ಧನಶ್ರೀ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರಕುಮಾರ,

ಎಸ್ಐ ತುಳಜಪ್ಪ, ಬಾಂಬ್ ನಿಷ್ಕ್ರೀಯ ದಳ ತಂಡದ ಅಧಿಕಾರಿಗಳಾದ ರಾಜಶೇಖರ, ವಿಜಯಕುಮಾರ, ಬಸವಣ್ಣಪ್ಪ, ಸಂಜೀವ್ , ಶ್ವಾನ ದಳದ ಅಧಿಕಾರಿಗಳಾದ ಮಂಜುನಾಥ, ಅನೀಲ್, ಪ್ರದೀಪ್ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...