ಕಲಬುರಗಿ| ಮತದಾರರಲ್ಲಿ ಜಾಗೃತಿ ಅಭಿಯಾನ: ಸೈಕಲ್‌ ಜಾಥಾಗೆ ಚಾಲನೆ

Date:

Share post:

ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಲ್ಲಿ ಜಾಗೃತಿ ಜಾಥಾ ಉಂಟು ಮಾಡುವ ನಿಟ್ಟಿನಲ್ಲಿ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಯೋಜಿಸಿದ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಗತ್ ವೃತ್ತದಲ್ಲಿ ಚಾಲನೆ ನೀಡಿ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಪ್ರೇರೇಪಿಸಿದರು.

ಜಗತ್ ವೃತ್ತದಿಂದ‌ ಅರಂಭಗೊಂಡ ಜಾಥಾ ಡಿ.ಸಿ. ಕಚೇರಿ ವರೆಗೂ ಸಾಗಿತ್ತು.ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಸೈಕಲ್ ತುಳಿದು ಸಂತಸಪಟ್ಟರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ ಆನಂದಶೀಲ, ತಾಲೂಕಾ ಪಂಚಾಯತ್ ಇ‌.ಓಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಯುವಕರು, ಸೈಕ್ಳಿಸ್ಟ್ ಗಳು ಜಾಥಾದಲ್ಲಿ ಭಾಗಿಯಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...