ಕಲಬುರಗಿ| ಹೆಚ್ಚು ಗಳಿಕೆಯ ಆಮಿಷ: ನಿವೃತ್ತ ನೌಕರನಿಗೆ ಕೋಟಿ ವಂಚನೆ

Date:

Share post:

ಕಲಬುರಗಿ: ಹೆಚ್ಚಿನ ಹಣ ಗಳಿಕೆಯ ಆಮಿಷವೊಡ್ಡಿ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂ ನಿವೃತ್ತ ನೌಕರರೊಬ್ಬರಿಗೆ 2.24 ಕೋಟಿ ರೂ. ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಅಕ್ಕಮಹಾದೇವಿ ಕಾಲೊನಿಯ ನಿವಾಸಿ, ಜೆಸ್ಕಾಂ ನಿವೃತ್ತ ನೌಕರರಾಗಿರುವ 63 ವರ್ಷದ ದತ್ತಪ್ಪ ಸುರಪುರ ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ.

‘ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ರೀಲ್ಸ್ ನೋಡುತ್ತಿದ್ದಾಗ ಕಳೆದ ವರ್ಷ ಜೂನ್ 11ರಂದು ‘ಆಟೊ ಟ್ರೇಡಿಂಗ್’ ಜಾಹೀರಾತು ಕಾಣಿಸಿತ್ತು. ಅದರ ಮೇಲಿನ ಲಿಂಕ್ ಕ್ಲಿಕ್ ಮಾಡಿ, ನನ್ನ ವೈಯಕ್ತಿಕ ಮಾಹಿತಿ ನಮೂದಿಸಿದೆ. ಬಳಿಕ ಅರುಣ ಜೋಶಿ ಎಂಬಾತ ‘ಕ್ವಾಂಟಾ ಪಲ್ಸ್‌’ನಲ್ಲಿ ಹೂಡಿಕೆಗೆ ಉತ್ತೇಜಿಸಿದ್ದಾನೆ. ಆರಂಭದಲ್ಲಿ ₹12 ಸಾವಿರ ಹೂಡಿಕೆ ಮಾಡಿದೆ. ನಿತ್ಯ ಆಟೊ ಟ್ರೇಡಿಂಗ್ ಲಾಭವಾಗಿ ₹500, ₹800 ಖಾತೆಗೆ ಬರುತ್ತಿತ್ತು’, ಹೀಗೆ ಹೂಡಿಕೆಯ ನೆಪದಲ್ಲಿ ಹಣ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...