ಕಲಬುರಗಿ| ಹೆಚ್ಚು ಗಳಿಕೆಯ ಆಮಿಷ: ನಿವೃತ್ತ ನೌಕರನಿಗೆ ಕೋಟಿ ವಂಚನೆ

Date:

Share post:

ಕಲಬುರಗಿ: ಹೆಚ್ಚಿನ ಹಣ ಗಳಿಕೆಯ ಆಮಿಷವೊಡ್ಡಿ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂ ನಿವೃತ್ತ ನೌಕರರೊಬ್ಬರಿಗೆ 2.24 ಕೋಟಿ ರೂ. ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಅಕ್ಕಮಹಾದೇವಿ ಕಾಲೊನಿಯ ನಿವಾಸಿ, ಜೆಸ್ಕಾಂ ನಿವೃತ್ತ ನೌಕರರಾಗಿರುವ 63 ವರ್ಷದ ದತ್ತಪ್ಪ ಸುರಪುರ ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ.

‘ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ರೀಲ್ಸ್ ನೋಡುತ್ತಿದ್ದಾಗ ಕಳೆದ ವರ್ಷ ಜೂನ್ 11ರಂದು ‘ಆಟೊ ಟ್ರೇಡಿಂಗ್’ ಜಾಹೀರಾತು ಕಾಣಿಸಿತ್ತು. ಅದರ ಮೇಲಿನ ಲಿಂಕ್ ಕ್ಲಿಕ್ ಮಾಡಿ, ನನ್ನ ವೈಯಕ್ತಿಕ ಮಾಹಿತಿ ನಮೂದಿಸಿದೆ. ಬಳಿಕ ಅರುಣ ಜೋಶಿ ಎಂಬಾತ ‘ಕ್ವಾಂಟಾ ಪಲ್ಸ್‌’ನಲ್ಲಿ ಹೂಡಿಕೆಗೆ ಉತ್ತೇಜಿಸಿದ್ದಾನೆ. ಆರಂಭದಲ್ಲಿ ₹12 ಸಾವಿರ ಹೂಡಿಕೆ ಮಾಡಿದೆ. ನಿತ್ಯ ಆಟೊ ಟ್ರೇಡಿಂಗ್ ಲಾಭವಾಗಿ ₹500, ₹800 ಖಾತೆಗೆ ಬರುತ್ತಿತ್ತು’, ಹೀಗೆ ಹೂಡಿಕೆಯ ನೆಪದಲ್ಲಿ ಹಣ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...