ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಪುಟ್ಟಮಣಿ ದೇವಿದಾಸ ಸಹಾಯಕ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರು ಗೋದುತಾಯಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರು ತಮ್ಮ ಮುಖ್ಯ ಅತಿಥಿಯ ಭಾಷಣದಲ್ಲಿ ಭಾಷೆಯ ಮಹತ್ವ ವೈಶಿಷ್ಟತೆಗಳು, ಭಾಷೆಯ ಅಳಿವು ಉಳಿವು ವಿವಿಧ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಕನ್ನಡ ಭಾಷೆಯ ಮಹತ್ವವನ್ನು ಮತ್ತು ವಿವಿಧ ಭಾಷೆಗಳ ಅಳವಡಿಕೆಯ ಮೂಲಕ ಭಾಷೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕವಿತಾ ಠಾಕೂರ್, ಬಸಮ್ಮ ಗೊಬ್ಬುರ, ಡಾ.ಜ್ಯೋತಿಪ್ರಕಾಶ ದೇಶಮುಖ, ಕವಿತಾ ಎ ಎಮ್, ಡಾ ಶ್ರೀದೇವಿ ಸಿದ್ದಣ್ಣ, ಅಶ್ವಿನಿ ಮಠ್,ಡಾ ಮೌಶಿನಾ ಫಾತಿಮಾ, ಡಾ ಮಮತಾ ಬಿ ನಾಟಿಕಾರ್, ತಸ್ಮಿಯಾ ರೂಬಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


