ಕಲಬುರಗಿ| ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ

Date:

Share post:

ಕಲಬುರಗಿ: ‘ಛಾಯಾಚಿತ್ರ ಕಲೆ ಯಂತ್ರ ಮುಖೇನ ಸೃಷ್ಟಿಯಾಗುತ್ತದೆ, ನಿಜ ಆದರೆ ಅದರ ಹಿಂದೆ ಸೃಜನಶೀಲ ಕಲಾವಿದನ ಮನಸ್ಸು ಇದ್ದರೆ ಅದು ಒಂದು ಸುಂದರ ಕಲಾಕೃತಿಯಾಗುತ್ತದೆ’ ಎಂದು ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ತೋಟದ ಹೇಳಿದರು.

ನಗರದ ಮಾನಕರ ಲೇಔಟ್ ನಲ್ಲಿರುವ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾದ ಹವ್ಯಾಸಿ ಛಾಯಾಗ್ರಾಹಕ ಉದಯಕುಮಾರ ಬಗಲಿ ಅವರ

ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಸಾಹಿತಿ ವೆಂಕಣ್ಣ ದೊಣ್ಣೆಗೌಡ ಅವರು, ‘ಛಾಯಾಚಿತ್ರಗಳು ಕಾಲದ ದಾಖಲೆಗಳಾಗಿ ಮಹತ್ವದ ಪಾತ್ರ ವಹಿಸುತ್ತವೆ, ನಿಸರ್ಗದಲ್ಲಿ ಎಲ್ಲವೂ ನಿರಂತರ ಬದಲಾವಣೆಯ ಪ್ರಕ್ರಿಯೆಗೆ ಒಳಗತ್ತಲೇ ಇರುತ್ತದೆ, ಆದರೆ ತಲೆಮಾರುಗಳು ಉರುಳಿದರೂ, ಕಾಲದ ಅಂತರದಲ್ಲಿ, ಸನ್ನಿವೇಶ ಸಂದರ್ಭಗಳಲ್ಲಿ ಬದಲಾದ ಸ್ಥಿತಿಗಳನ್ನು ಛಾಯಾಚಿತ್ರಗಳು ತೋರಿಸುತ್ತವೆ’ ಎಂದರು.

ಮುಂದುವರಿದು ‘ಸಾವಿರಾರು ಶಬ್ದಗಳಲ್ಲಿ ವರ್ಣಿಸಬಹುದಾದುದನ್ನು ಒಂದು ಛಾಯಾಚಿತ್ರ ನೋಟ ಒಂದರಲ್ಲೇ ಎಲ್ಲವನ್ನೂ ಅರಿವಿಗೆ ತಂದುಕೊಡುತ್ತದೆ’ ಎಂದರು.

‘ಛಾಯಾಚಿತ್ರಕಲೆಯಲ್ಲಿ ಸನ್ನಿವೇಶದ ಆಯ್ಕೆ, ನೆರಳು ಬೆಳಕಿನ ಹೊಯ್ ದಾಟ ಬಹಳ ಮುಖ್ಯವಾಗಿರುತ್ತದೆ’ ಎಂದು ಇನ್ನೋರ್ವ ಅತಿಥಿಯಾಗಿದ್ದ ಕಲಾವಿದ ಗುರುಲಿಂಗ ಅರಳಿ ಅಭಿಮತಪಟ್ಟರು.

 

ಬಿಸಿಲು ಆರ್ಟ್ ಗ್ಯಾಲರಿಯ ಕ್ಯೂರೇಟರ್ ಮತ್ತು ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಲಾವಿದ ವಿ.ಬಿ ಬಿರಾದಾರ ಮಾತನಾಡಿದರು.

ಕಲಾವಿದ ಮಲ್ಲಿಕಾರ್ಜುನ ಕೊರಳ್ಳಿಯವರು ಕಾರ್ಯಕ್ರಮವನ್ನು ನಿರೂಪಿಸಿದರು, ಕಲಾವಿದ ರಾಜು ಕಾಳೆ ವಂದಿಸಿದರು.

ಕಲಾವಿದರಾದ ಸೂರ್ಯಕಾಂತ ನಂದೂರ, ದೌಲತರಾಯ ದೇಸಾಯಿ, ಜಿತೇಂದ್ರ ಕೊಥಲೀಕರ, ನಾರಾಯಣ ಜೋಶಿ, ಮೌನೇಶ್ ಬಡಿಗೇರ, ಗಿರೀಶ ಕುಲಕರ್ಣಿ, ಡಾ ಶಿವಾನಂದ ಬಂಟನೂರ, ಜಗದೀಶ್ ಕಾಂಬಳೆ, ವಿಜಯಕುಮಾರ, ಕುಪೇಂದ್ರ ಮೊದಲಾದ ಕಲಾವಿದರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...