ಕಲಬುರಗಿ| ಪೊಲೀಸರ ನೆರವಿನಿಂದ ಮನೆ ಸೇರಿದ ಮಾನಸಿಕ ಆಸ್ವಸ್ಥೆ

Date:

Share post:

ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ ಪೋಷಕರ ಮನೆ ಸೇರಿದ ಘಟನೆ ವಾಡಿ ಪಟ್ಟಣದಲ್ಲಿ ರವಿವಾರ ನಡೆದಿದೆ.

ಕಳೆದ 2 ತಿಂಗಳ ಹಿಂದೆ ಸಮೀಪದ ಹಲಕರ್ಟಿ ಗ್ರಾಮಕ್ಕೆ ಬಂದಿದ್ದ ರಾಯಚೂರು ತಾಲ್ಲೂಕಿನ ಇಡಪಾನೂರು ಗ್ರಾಮದ ಮಾನಸಿಕ ಆಸ್ವಸ್ಥ ಮಹಿಳೆ ನರಸಮ್ಮ ಬಸ್ ಸ್ಟಾಂಡ್ ನಲ್ಲಿಯೇ ವಾಸವಾಗಿದ್ದಳು. ಸ್ಥಳೀಯರು ಅನ್ನ ನೀರು ಹಾಗೂ ಬಟ್ಟೆ ಒದಗಿಸಿದ್ದರು. ಆದರೆ ಶನಿವಾರ ರಾತ್ರಿ ಬಟ್ಟೆ ಹರಿದ ಸ್ಥಿತಿಯಲ್ಲಿ ಮಹಿಳೆ ಕಂಡು ಬಂದಿದ್ದರಿಂದ ಸ್ಥಳೀಯರು ಪೊಲೀಸ್ ಠಾಣೆಗೆ ವರದಿ ನೀಡಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಸಿಪಿಐ ಸಿದ್ದಬಸವನಗೌಡ ಪಿಎಸ್ಐ ತಿರುಮಲೇಶ ಕೆ. ಹಾಗೂ ರೇಣುಕಾ ಉಡಗಿ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪೋಷಕರ ಪತ್ತೆಯಲ್ಲಿ ನಿರತರಾಗಿದ್ದರು.

ಇಡಪಾನೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಎಂದು ಗುರುತಿಸಿ ಪೋಷಕರ ಪತ್ತೆ ಹಚ್ಚಿ ಮಾಹಿತಿ ನೀಡಿದ್ದಾರೆ. ನಂತರ ತಡರಾತ್ರಿ ಠಾಣೆಗೆ ಬಂದ ಮಹಿಳೆಯ ಪೋಷಕರು ಮಹಿಳೆಯನ್ನು ಜತೆಯಲ್ಲಿ ಕರೆದುಕೊಂಡು ಹೋದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...