ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಕೊರತೆ ಇಲ್ಲ: ಆಹಾರ ಇಲಾಖೆ ಡಿಡಿ ಸ್ಪಷ್ಟನೆ

Date:

ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಗೃಹ ಬಳಕೆ ಅಡುಗೆ ಅನಿಲ ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು. ದೇಶಾದ್ಯಂತ ಎಲ್.ಪಿ.ಜಿ. (LPG) ಉತ್ಪಾದನೆ ಮತ್ತು ಬಾಟಲಿಂಗ್ ಎರಡು ಹೆಚ್ಚಿರುವುದರಿಂದ ದೇಶಿಯ ಎಲ್.ಪಿ.ಜಿ. (LPG) ಯ ಕೊರತೆಯಿಲ್ಲ. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (ಸಿಲಿಂಡರಗಳು) ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನುಮಾಡಿಕೊಳ್ಳಬಾರದೆಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ IVRS/Missed Call ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಿ ಸದರಿ ಸಿಸ್ಟಮ್‍ಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ IOCL, HPCL ಹಾಗೂ BPCL LPG ತೈಲ ಕಂಪನಿಗಳು ಗ್ರಾಹಕರಿಗೆ 6 ಬುಕ್ಕಿಂಗ್ ವಿಧಾನಗಳನ್ನು ಲಭ್ಯವಿದ್ದು, IVRS, Missed Call, Whatsapp, Mobile Application, OMC Portal ಹಾಗೂ ಪಾವತಿ ಅಪ್ಲಿಕೇಶನ್ ಗಳು (Paytm/ PhonePe) ನಂತಹ ಇತ್ಯಾದಿ. ಗ್ರಾಹಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ವ್ಯವಸ್ಥೆಯನ್ನು ಬಳಸಬೇಕು.

ಬೇಡಿಕೆಯ ಭಾಗವನ್ನು ನಿರ್ವಹಿಸಲು, ಪ್ರತಿ ಗ್ರಾಹಕರಿಗೆ ಕೊನೆಯ ಮರುಪೂರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್- ಬುಕ್ಕಿಂಗ್ ಅವಧಿಯನ್ನು ನಿಗದಿಪಡಿಸಲಾಗಿದೆ. ಒಂದು ವೇಳೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕಿನ ತಹಸೀಲ್ದಾರರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಕಛೇರಿಯ ದೂರವಾಣಿ ಸಂಖ್ಯೆ: 08472-200112 ಗೆ ಕರೆ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಪೊಲೀಸರ ನೆರವಿನಿಂದ ಮನೆ ಸೇರಿದ ಮಾನಸಿಕ ಆಸ್ವಸ್ಥೆ

ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ...

ಕಲಬುರಗಿ| ಪಶು ವೈದ್ಯರನ್ನು ನೇಮಿಸಲು ಶಾಸಕ ಬಸವರಾಜ ಮತ್ತಿಮಡು ಆಗ್ರಹ

ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು...

ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಲು ಸಂಸ್ಥೆಗಳಿಗೆ ಸಚಿವರ ಒತ್ತಾಯ

ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು...