ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

Date:

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಪಟ್ಟಣದ ಮರಗೋಳ ಕಾಲೇಜಿನ ಬಳಿಯ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ.

ನಾಗರಾಜ (40) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ತಿರುಪತಿ ದೇವಕರ ಕೊಲೆ ಆರೋಪಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ತಿರುಪತಿ, ತನ್ನ ಸೋದರತ್ತೆಯ ಆಸ್ತಿಗಾಗಿ ಜೇವರ್ಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದ. ಆದರೆ ಇದಕ್ಕೆ ಅತ್ತೆಯ ಮಗ ನಾಗರಾಜ ಅಡ್ಡಿಯಾಗಿದ್ದ. ಇದರಿಂದ ಇತ್ತೀಚೆಗೆ ತೀವ್ರ ಕುಪಿತಗೊಂಡಿದ್ದ ತಿರುಪತಿ ನಾಗರಾಜನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಕಲಬುರಗಿ ಎಎಸ್‌ಪಿ ಮಹೇಶ ಮೇಘಣ್ಣನವರ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ಪಿ.ಎಸ್.ವನಂಜಕರ, ಪಿಎಸ್‌ಐ ಚಂದ್ರಕಾಂತ ಮೆಕಾಲೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು.

ಕೊಲೆಯ ಬಳಿಕ ಆರೋಪಿ ತಿರುಪತಿ ಪೊಲೀಸರಿಗೆ ಶರಣಾಗಿದ್ದಾನೆ.

ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...