ಕಲಬುರಗಿ| ಫೋನ್‌ಪೇ ಮೂಲಕ 15 ಸಾವಿರ ಪಡೆದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Date:

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಅನುದಾನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಫೋನ್‌ಪೇ ಮೂಲಕ ₹15 ಸಾವಿರ ಸ್ವೀಕರಿಸಿದ್ದ ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್‌ರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಆಗಿರುವ ಸಂತೋಷ ರಾಠೋಡ ಬಂಧಿತ ಆರೋಪಿ. ಹನಿಕೆರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಅವರು ಲೋಕಾಯುಕ್ತಕ್ಕೆ ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ದೂರಿನ ಪ್ರಕಾರ, ಸಿಖಂದರ್ ಅವರ ಅಕ್ಕ ಸವಿತಾ ಅವರಿಗೆ ಸರ್ಕಾರದ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ಬಿಡುಗಡೆ ಮಾಡಲು ಸಂತೋಷ ರಾಠೋಡ 22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮೊದಲ ಹಂತವಾಗಿ ಫೋನ್‌ಪೇ ಮೂಲಕ ₹15 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಅವರನ್ನು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಬಂಧಿತ ಆರೋಪಿಯನ್ನು ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ‘ಅಭಿ ಪಿಚ್ಚರ್ ಬಾಕಿ ಹೈ..’: ಆರೆಸ್ಸೆಸ್ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಆರೆಸ್ಸೆಸ್ ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ...

ಕಲಬುರಗಿ| ಜಗಜೀವನ್ ರಾಮ್ ಪುಣ್ಯಸ್ಮರಣೆ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಲಾರ್ಪಣೆ

ಕಲಬುರಗಿ: ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿ ನಗರದಲ್ಲಿರುವ...

ಕಲಬುರಗಿ: ಸೂಪರ್‌ ಎಲ್ನಿನೋ ಸಂಕಷ್ಟ: ಬರ ಪರಿಸ್ಥಿತಿ ಖುದ್ದಾಗಿ ಅರಿಯಲು ಸಿ.ಎಂ. ಕಲಬುರಗಿಗೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಸೂಪರ್‌ ಎಲ್ನಿನೋ ಕಾರಣದಿಂದ  ನಾಡಿನಾದ್ಯಂತ ಬರದ ಛಾಯೆ ಆವರಿಸಿದ್ದರಿಂದ ವಿಭಾಗವಾರು...