ಕಲಬುರಗಿ| ಲಂಚ ಪಡೆದ ತಹಸೀಲ್ದಾರರಿಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ!

Date:

Share post:

ಕಲಬುರಗಿ: ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರರಾಗಿದ್ದ ಶ್ರೀಮತಿ ಶಶಿಕಲಾ ಪಾದಗಟ್ಟಿ ಹಾಗೂ ಖಾಸಗಿ ವ್ಯಕ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರದಂತೆ, ಅಫಜಲಪುರ ತಾಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಾರ್ವಜನಿಕರಿಂದ ಹಣ ಪಡೆಯುತ್ತಾರೆ ಎಂಬ ದೂರುಗಳು ಬಂದಿದ್ದವು. ಈ ಕುರಿತು ತಮ್ಮ ವಿರುದ್ಧದ ಅರ್ಜಿಯನ್ನು ಬಗೆಹರಿಸಲು ಸಹಾಯ ಮಾಡುವಂತೆ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರನ್ನು ವಿಚಾರಿಸಿದಾಗ, ಒಂದು ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಲಂಚ ನೀಡದಿದ್ದರೆ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಬೇರೆಯವರನ್ನು ನೇಮಕ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಶಿವಲಿಂಗಯ್ಯ ಅವರು 2017ರ ಆಗಸ್ಟ್ 31ರಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯಲ್ಲಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರು ಲಂಚದ ಹಣವನ್ನು ಶಿವಾನಂದ ಜಮಖಂಡಿ ಎಂಬುವವರ ಮೂಲಕ ಸ್ವೀಕರಿಸಲು ಸೂಚಿಸಿದ್ದರು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ ಅವರ ಮುಂದೆ ನಡೆದಿದ್ದು, ಸಾಕ್ಷ್ಯಾಧಾರಗಳು ಹಾಗೂ ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ಬಳಿಕ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದರು.

ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7, 13(1)(ಡಿ) ಜೊತೆಗೆ 13(2) ಅಡಿಯಲ್ಲಿ ಹಾಗೂ ಶಿವಾನಂದ ಜಮಖಂಡಿ ಅವರಿಗೆ ಕಲಂ 8ರಡಿ ತಲಾ 4 ವರ್ಷ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ 2026ರ ಜುಲೈ 8ರಂದು ತೀರ್ಪು ಪ್ರಕಟಿಸಲಾಯಿತು.

ಸರಕಾರದ ಪರವಾಗಿ ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ಅವರು ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹಣಮಂತರಾಯ (ಎಚ್‌ಸಿ) ಹಾಗೂ ಗುಂಡುರಾವ್ (ಪಿಸಿ) ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...