ಕಲಬುರಗಿ| ಪಾಕ್ ವಿರುದ್ಧ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ: ಜಮೀರ್ ಅಹ್ಮದ್ ಖಾನ್

Date:

Share post:

ಕಲಬುರಗಿ: ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರು, ನಮ್ಮ ಬೆಂಬಲ ಕೇಂದ್ರಕ್ಕಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಪಕ್ಷದಿಂದ ಬೆಂಬಲವಿದೆ ಎಂದು ಈಗಾಗಲೇ, ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಪಾಕಿಸ್ತಾನ ವಿರುದ್ಧ ಕೈಗೊಳ್ಳವ ನಿರ್ಧಾರಕ್ಕೆ ನಾವು ಬದ್ದ ಎಂದು ಸ್ಪಷ್ಟಪಡಿಸಿದರು.

ಇನ್ನೂ, ಜಮೀರ್ ಯುದ್ದಕ್ಕೆ ಹೋಗೊದು ಬೇಡ, ಇಲ್ಲಿರೋ ಕುನ್ನಿಗಳನ್ನ ಕೊಲ್ಲಲಿ ಎನ್ನೋವ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಈಗಲೂ ನನ್ನ ಹೇಳಿಕೆಗೆ ಬದ್ದನಿದ್ದೇನೆ. ಸುಸೈಡ್ ಬಾಂಬ್ ಕಟ್ಟಿಕೊಂಡು ಹೋಗುತ್ತೇನೆ. ಸಿ.ಟಿ.ರವಿಗೆ ಕೆಲಸವೇನು ಇಲ್ಲ. ಅದಕ್ಕಾಗಿ ಹಿಂಗೆಲ್ಲ ಮಾತನಾಡುತ್ತಾರೆ. ನಮಗೆ ನಮ್ಮ ದೇಶ ಮುಖ್ಯ. ಅದಕ್ಕಾಗಿ ನಾನು ಯುದ್ದಕ್ಕೆ ಹೋಗುತ್ತೇನೆ ಎಂದಿದ್ದೇನೆ ಎಂದು ಟಾಂಗ್ ನೀಡಿದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...