ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

Date:

Share post:

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೋಳಿ ಮೈಸೂರಿನಲ್ಲಿ ಸೌಜನ್ಯಯುತವಾಗಿ ಕೆಲ ನಾಯಕರನ್ನು ಭೇಟಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹೊಡೆತ ಎಂಬ ಶಾಸಕ ರಾಜು ಕಾಗೆ ಹೇಳಿಕೆ ವೈಯಕ್ತಿಕವಾಗಿದ್ದು, ಅದನ್ನು ವೈಭವಿಕರಿಸುವ ಅಗತ್ಯವಿಲ್ಲ ಎಂದರು.

ಬಳಿಕ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಪ್ರತಿಕ್ರಿಯಿಸಿದ ಅವರು, ಕೇಸ್‌ಗಳನ್ನ ವಾಪಸ್ ಪಡೆಯೋದು ಸರ್ಕಾರದ ಮಟ್ಟದಲ್ಲಿ ನಡೆಯುವ ಒಂದು ಪ್ರಕ್ರಿಯೆ. ಯಾರೋ ಹೇಳ್ತಾರೆ ಅಂತ ಸರ್ಕಾರ ಕೇಸ್ ವಾಪಸ್ ಪಡೆಯವುದಿಲ್ಲ, ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಚರ್ಚೆ ನಡೆದ ಬಳಿಕ ಕೇಸ್ ವಾಪಸ್ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸಂಬಂಧವಿಲ್ಲದ, ನಿರಾಪರಾಧಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಈ

ಗಲಭೆಯಲ್ಲಿ ಸಾಕಷ್ಟು ಜನ ಅಮಾಯಕರು ಸಿಲುಕಿಕೊಂಡಿದ್ದರು. ಅಂತವರ ಮೇಲೆ ಸಹ ಆ ಸಂದರ್ಭದಲ್ಲಿ ಕೇಸ್ ಹಾಕಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಒಂದೇ ಅಲ್ಲ, ವಿವಿಧ ಪ್ರಕರಣಗಳಲ್ಲಿ 43 ಕೇಸ್‌ಗಳನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...