ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

Date:

Share post:

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೋಳಿ ಮೈಸೂರಿನಲ್ಲಿ ಸೌಜನ್ಯಯುತವಾಗಿ ಕೆಲ ನಾಯಕರನ್ನು ಭೇಟಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹೊಡೆತ ಎಂಬ ಶಾಸಕ ರಾಜು ಕಾಗೆ ಹೇಳಿಕೆ ವೈಯಕ್ತಿಕವಾಗಿದ್ದು, ಅದನ್ನು ವೈಭವಿಕರಿಸುವ ಅಗತ್ಯವಿಲ್ಲ ಎಂದರು.

ಬಳಿಕ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಪ್ರತಿಕ್ರಿಯಿಸಿದ ಅವರು, ಕೇಸ್‌ಗಳನ್ನ ವಾಪಸ್ ಪಡೆಯೋದು ಸರ್ಕಾರದ ಮಟ್ಟದಲ್ಲಿ ನಡೆಯುವ ಒಂದು ಪ್ರಕ್ರಿಯೆ. ಯಾರೋ ಹೇಳ್ತಾರೆ ಅಂತ ಸರ್ಕಾರ ಕೇಸ್ ವಾಪಸ್ ಪಡೆಯವುದಿಲ್ಲ, ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಚರ್ಚೆ ನಡೆದ ಬಳಿಕ ಕೇಸ್ ವಾಪಸ್ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸಂಬಂಧವಿಲ್ಲದ, ನಿರಾಪರಾಧಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಈ

ಗಲಭೆಯಲ್ಲಿ ಸಾಕಷ್ಟು ಜನ ಅಮಾಯಕರು ಸಿಲುಕಿಕೊಂಡಿದ್ದರು. ಅಂತವರ ಮೇಲೆ ಸಹ ಆ ಸಂದರ್ಭದಲ್ಲಿ ಕೇಸ್ ಹಾಕಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಒಂದೇ ಅಲ್ಲ, ವಿವಿಧ ಪ್ರಕರಣಗಳಲ್ಲಿ 43 ಕೇಸ್‌ಗಳನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...