ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

Date:

Share post:

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೋಳಿ ಮೈಸೂರಿನಲ್ಲಿ ಸೌಜನ್ಯಯುತವಾಗಿ ಕೆಲ ನಾಯಕರನ್ನು ಭೇಟಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹೊಡೆತ ಎಂಬ ಶಾಸಕ ರಾಜು ಕಾಗೆ ಹೇಳಿಕೆ ವೈಯಕ್ತಿಕವಾಗಿದ್ದು, ಅದನ್ನು ವೈಭವಿಕರಿಸುವ ಅಗತ್ಯವಿಲ್ಲ ಎಂದರು.

ಬಳಿಕ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಪ್ರತಿಕ್ರಿಯಿಸಿದ ಅವರು, ಕೇಸ್‌ಗಳನ್ನ ವಾಪಸ್ ಪಡೆಯೋದು ಸರ್ಕಾರದ ಮಟ್ಟದಲ್ಲಿ ನಡೆಯುವ ಒಂದು ಪ್ರಕ್ರಿಯೆ. ಯಾರೋ ಹೇಳ್ತಾರೆ ಅಂತ ಸರ್ಕಾರ ಕೇಸ್ ವಾಪಸ್ ಪಡೆಯವುದಿಲ್ಲ, ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಚರ್ಚೆ ನಡೆದ ಬಳಿಕ ಕೇಸ್ ವಾಪಸ್ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸಂಬಂಧವಿಲ್ಲದ, ನಿರಾಪರಾಧಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಈ

ಗಲಭೆಯಲ್ಲಿ ಸಾಕಷ್ಟು ಜನ ಅಮಾಯಕರು ಸಿಲುಕಿಕೊಂಡಿದ್ದರು. ಅಂತವರ ಮೇಲೆ ಸಹ ಆ ಸಂದರ್ಭದಲ್ಲಿ ಕೇಸ್ ಹಾಕಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಒಂದೇ ಅಲ್ಲ, ವಿವಿಧ ಪ್ರಕರಣಗಳಲ್ಲಿ 43 ಕೇಸ್‌ಗಳನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...